ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.
ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.
ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…