ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.
ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.
ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…