ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.
ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.
ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…