ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ ‘ಕರ್ತವ್ಯ ಪಥ’ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ “ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು” ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ.
ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಎಂ.ಇಮಕೊಂಗ್ಲ್ ಜಮೀರ್ ಅವರು ರಾಷ್ಟ್ರೀಯ ರಂಗಶಾಲಾ ಶಿಬಿರಕ್ಕೆ ಶುಕ್ರವಾರದಂದು ಭೇಟಿ ನೀಡಿ, ಸ್ತಬ್ಧಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಧಿಕಾರಿಗಳು ರಾಜ್ಯ ಸ್ತಬ್ಧಚಿತ್ರದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ನವದೆಹಲಿಯ ಕರ್ನಾಟಕ ಭವನದ ಸಹಾಯ ನಿವಾಸಿ ಆಯುಕ್ತರೂ ಆದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಸಿ.ಮೋಹನ ಕುಮಾರ್, ವ್ಯವಸ್ಥಾಪಕರಾದ ಕೆ.ಆರ್.ವೆಂಕಟೇಶ, ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ಪ್ರಭಾರ ಉಪ ನಿರ್ದೇಶಕಿ ಎಂ.ಶಾಲಿನಿ, ಪ್ರತಿರೂಪಿ ಸಂಸ್ಥೆಯ ರಾಜಕುಮಾರ್ ಉಪಸ್ಥಿತರಿದ್ದರು.
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…