ರಾಜ್ಯ

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ರಾಜ್ಯದ ಸ್ತಬ್ಧಚಿತ್ರ ವೀಕ್ಷಣೆ

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ ‘ಕರ್ತವ್ಯ ಪಥ’ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ “ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು” ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ.

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಎಂ.ಇಮಕೊಂಗ್ಲ್ ಜಮೀರ್ ಅವರು ರಾಷ್ಟ್ರೀಯ ರಂಗಶಾಲಾ ಶಿಬಿರಕ್ಕೆ ಶುಕ್ರವಾರದಂದು ಭೇಟಿ ನೀಡಿ, ಸ್ತಬ್ಧಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಧಿಕಾರಿಗಳು ರಾಜ್ಯ ಸ್ತಬ್ಧಚಿತ್ರದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ನವದೆಹಲಿಯ ಕರ್ನಾಟಕ ಭವನದ ಸಹಾಯ ನಿವಾಸಿ ಆಯುಕ್ತರೂ ಆದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಸಿ.ಮೋಹನ ಕುಮಾರ್, ವ್ಯವಸ್ಥಾಪಕರಾದ ಕೆ.ಆರ್.ವೆಂಕಟೇಶ, ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ಪ್ರಭಾರ ಉಪ ನಿರ್ದೇಶಕಿ ಎಂ.ಶಾಲಿನಿ, ಪ್ರತಿರೂಪಿ ಸಂಸ್ಥೆಯ ರಾಜಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

4 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

5 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

7 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

10 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

11 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

17 hours ago