ರಾಜ್ಯ

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ರಾಜ್ಯದ ಸ್ತಬ್ಧಚಿತ್ರ ವೀಕ್ಷಣೆ

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ ‘ಕರ್ತವ್ಯ ಪಥ’ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ “ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು” ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ.

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಎಂ.ಇಮಕೊಂಗ್ಲ್ ಜಮೀರ್ ಅವರು ರಾಷ್ಟ್ರೀಯ ರಂಗಶಾಲಾ ಶಿಬಿರಕ್ಕೆ ಶುಕ್ರವಾರದಂದು ಭೇಟಿ ನೀಡಿ, ಸ್ತಬ್ಧಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಧಿಕಾರಿಗಳು ರಾಜ್ಯ ಸ್ತಬ್ಧಚಿತ್ರದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ನವದೆಹಲಿಯ ಕರ್ನಾಟಕ ಭವನದ ಸಹಾಯ ನಿವಾಸಿ ಆಯುಕ್ತರೂ ಆದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಸಿ.ಮೋಹನ ಕುಮಾರ್, ವ್ಯವಸ್ಥಾಪಕರಾದ ಕೆ.ಆರ್.ವೆಂಕಟೇಶ, ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ಪ್ರಭಾರ ಉಪ ನಿರ್ದೇಶಕಿ ಎಂ.ಶಾಲಿನಿ, ಪ್ರತಿರೂಪಿ ಸಂಸ್ಥೆಯ ರಾಜಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

8 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

8 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

9 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

10 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

11 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

11 hours ago