ರಾಜ್ಯ

ನಾಳೆಯಿಂದ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ ; ಬಸ್‌ ಓಡಾಟ ವ್ಯತ್ಯಯ?

ಬೆಂಗಳೂರು : ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ(ಏ.21) ಮುಷ್ಕರಕ್ಕೆ ಧುಮುಕಲಿದ್ದಾರೆ.

ಶೇಕಡಾ 7 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಶೇಕಡಾ 25 ರಷ್ಟು ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ. ವೇತನ ಏರಿಕೆ ಮಾಡದ ಸರ್ಕಾರದ ವಿರುದ್ದ ಮತ್ತೊಂದು ಹಂತದ ಹೋರಾಟಕ್ಕೆ ನೌಕರರು ಸಜ್ಜಾಗಿದ್ದು, ನಾಳೆಯಿಂದ ಧರಣಿಗೆ ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ನಾಲ್ಕು ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದೆ. ಸಾರಿಗೆ ನೌಕರರು ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್​​​ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾದರೆ ಅಂತಹ ನೌಕರರ ವಿರುದ್ಧ ಶಿಸ್ತುಕ್ರಮ ಇಲ್ಲವೇ ಸೇವೆಯಿಂದ ಅಮಾನತುಪಡಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಆದರೆ ಇದಾವುದಕ್ಕೂ ಜಗ್ಗದ ನೌಕರರು ತಾವು ಪ್ರತಿಭಟನೆ ನಡೆಸಿಯೇ ತೀರುತ್ತೇವೆ ಎಂದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಧರಣಿ
ಕರ್ತವ್ಯಕ್ಕೆ ಗೈರಾಗಿ ಸಾವಿರಾರು ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾದ ನೌಕರರಿಗೆ ನಿಗಮಗಳು ಶಾಕ್‌ ಕೊಟ್ಟಿದ್ದು, ನೌಕರರ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ವಾರದ ರಜೆ, ದೀರ್ಘಾವಧಿ ರಜೆ ಹೊರತುಪಡಿಸಿ ಎಲ್ಲರೂ ಹಾಜರಾಗಬೇಕು. ಬೇಕಾಬಿಟ್ಟಿ ರಜೆ ಹಾಕಿ ಪ್ರತಿಭಟನೆಯಲ್ಲಿ ಕುಳಿತುಕೊಂಡರೆ ಸಸ್ಪೆಂಡ್‌ ಮಾಡುವ ಎಚ್ಚರಿಕೆ ನೀಡಿದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಿಂದ ನೌಕರರಿಗೆ ಸೂಚನೆ ನೀಡಲಾಗಿದೆ.

ನೌಕರರ ಬೇಡಿಕೆಗಳು ಏನು?
2020-2023ರ ಮೂರು ವರ್ಷ 2 ತಿಂಗಳು ವೇತನ ಬಿಡುಗಡೆ

38 ತಿಂಗಳ ಹಿಂಬಾಕಿ ಹಣ ಪಾವತಿ

2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ

ಸರ್ಕಾರದ ವಾದವೇನು?
2024ರ ಬದಲು 2026ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ

38 ತಿಂಗಳ ಬದಲು 18/20 ತಿಂಗಳ ಹಿಂಬಾಕಿ ಬಿಡುಗಡೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago