ಬೆಂಗಳೂರು: ರಾಜ್ಯದಲ್ಲಿ ರೂ 1,245 ಕೋಟಿ ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್ ತಯಾರಿಕಾ ಕಂಪನಿ ವೈಜಿ-1 ಘೋಷಿಸಿದೆ.
ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ. ಈ ಬಗ್ಗೆ ಬುಧುವಾರ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.
ಕರ್ನಾಟಕದಲ್ಲಿ ಕೊರಿಯಾ ಭಾಷೆ, ಕಲಿಕಾ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಇಂಧನ – ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಕಂಪನಿಯ ಮುಖ್ಯಸ್ಥ ಹೊ ಕ್ಯೂನ್ ಸಾಂಗ್ ಅವರು ಹೇಳಿದ್ದಾರೆ.
ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…
ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್…
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…