ರಾಜ್ಯ

2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಗಣ್ಯ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, `ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ ಎಂದು ಅವರು ತಿಳಿಸಿದರು.

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು.

ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ.

ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು ಎಂದು ಅವರು ನುಡಿದರು.

ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ.

ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ.

ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿದೆ ಎಂದು ಪಾಟೀಲ ವಿವರಿಸಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು

andolana

Recent Posts

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

9 mins ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

9 mins ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

10 mins ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

11 mins ago

ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ ಮೂರನೇ ಸಂಚಿಕೆ

ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…

1 hour ago

ಗಾಯಕಿ ಮಂಗ್ಲಿಯಿಂದ ೧೦ ಕೋಟಿ ವಂಚನೆ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…

2 hours ago