ರಾಜ್ಯ

2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಗಣ್ಯ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, `ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ ಎಂದು ಅವರು ತಿಳಿಸಿದರು.

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು.

ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ.

ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು ಎಂದು ಅವರು ನುಡಿದರು.

ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ.

ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ.

ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿದೆ ಎಂದು ಪಾಟೀಲ ವಿವರಿಸಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

3 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

3 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

3 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

3 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

3 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

3 hours ago