ರಾಜ್ಯ

2032ರ ವೇಳೆಗೆ ರಾಜ್ಯ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆ: ಎಂ ಬಿ ಪಾಟೀಲ

ಬೆಂಗಳೂರು: ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ. ಇದರಿಂದ ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.

ಇಲ್ಲಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು.

ಗಣ್ಯ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, `ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ ಎಂದು ಅವರು ತಿಳಿಸಿದರು.

ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು.

ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ.

ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು ಎಂದು ಅವರು ನುಡಿದರು.

ಉತ್ಕೃಷ್ಟ ಗುಣಮಟ್ಟದ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಬೆಂಗಳೂರು ನಗರವು, ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾಪೂರ್ಣ ಮಾನವ ಸಂಪನ್ಮೂಲವನ್ನು ಒದಗಿಸುವ ತೊಟ್ಟಿಲಾಗಿದೆ.

ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಇವುಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ.

ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣವಾಗಿದೆ ಎಂದು ಪಾಟೀಲ ವಿವರಿಸಿದರು.

ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago