ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳು ಮಾಹಿತಿ ನೀಡಿದ್ದಾರೆ.
ಯಾರ ನಿವಾಸದ ಮೇಲೆ ದಾಳಿ?
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ಗದಗ-ಬೆಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಕಚೇರಿ ಹಾಗೂ ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಅವರ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಇನ್ನೂ ಕೆಲ ಅಧಿಕಾರಿಗಳ ನಿವಾಸ, ಕಚೇರಿ ಮತ್ತು ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲೆ ಪತ್ರಗಳ ಸಹಿತ ವ್ಯಾಪಕ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…