ಬೆಂಗಳೂರು: ರಾಜ್ಯಾದ್ಯಾಂತ ಇಂದು ಬೆಳಿಗ್ಗೆ ಎಂಟು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ವಿವಿಧೆಡೆ ದಾಳಿ ನಡೆಸಿ ವ್ಯಾಪಕ ತಪಾಸಣೆ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕ್ತಾಯುಕ್ತ ಅಧಿಕಾರಿಗಳು ಇಂದು(ಜನವರಿ.8) ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಎಂಟು ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳು ಮಾಹಿತಿ ನೀಡಿದ್ದಾರೆ.
ಯಾರ ನಿವಾಸದ ಮೇಲೆ ದಾಳಿ?
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿ ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ಗದಗ-ಬೆಟಗೇರಿ ನಗರಸಭೆ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಕಚೇರಿ ಹಾಗೂ ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಅವರ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಇನ್ನೂ ಕೆಲ ಅಧಿಕಾರಿಗಳ ನಿವಾಸ, ಕಚೇರಿ ಮತ್ತು ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲೆ ಪತ್ರಗಳ ಸಹಿತ ವ್ಯಾಪಕ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…