ರಾಜ್ಯ

ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ, ವಿಜ್ಞಾನ ಕೇಂದ್ರ ನಿರ್ಮಾಣ: ಸಚಿವ ಬೋಸರಾಜು

ಬಳ್ಳಾರಿ: ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.

ಈ ಬಗ್ಗೆ ವಿಜಯನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಮಲಾಪುರದಲ್ಲಿ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ 10 ಎಕರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

11 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago