ಬೆಂಗಳೂರು: ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹ ಹೀರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ.
ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು.
ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಪಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ ಧ್ಯೇಯಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜು ಕೊಠಡಿಗೆ ನೇಹ ಹೆಸರು : ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ. ಈ ಬಗ್ಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಮಾಹಿತಿ ನೀಡಿದ್ದು, ನೇಹಾ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವಳ ನೆನಪಿಗಾಗಿ ನಾವು ಅಂಜುಮನ್ ಕಾಲೇಜಿನ ಒಂದು ಕೊಠಡಿಗೆ ನೇಹಾ ಹಿರೇಮಠ ಅವರ ಹೆಸರಿಡಲು ತೀರ್ಮಾನಿಸಿದ್ದೇವೆ. ಕೊಠಡಿಯನ್ನ ನೇಹ ತಂದೆ ತಾಯಿಯಿಂದಲೇ ಉದ್ಘಾಟನೆ ಮಾಡಿಸುತ್ತೇವೆ ಎಂದಿದ್ದಾರೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…