ರಾಜ್ಯ

ನೇಹ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

  • ಮುಸ್ಲಿಂ ಸಮುದಾಯದ ಮುಖಂಡರಿಂದ ನಾಳೆ ಅರ್ಧ ದಿನ ವ್ಯಾಪರ ಬಂದ್
  • ಮುಸ್ಲಿಂ ಸಂಸ್ಥೆ ಕಾಲೇಜು ಕೊಠಡಿಗೆ ನೇಹ ಹೆಸರು.

ಬೆಂಗಳೂರು: ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹ ಹೀರೇಮಠ್‌ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ.

ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು.

ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ ಧ್ಯೇಯಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಧಾರವಾಡದ ಅಂಜುಮನ್‌ ಸಂಸ್ಥೆಯ ಕಾಲೇಜು ಕೊಠಡಿಗೆ ನೇಹ ಹೆಸರು : ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ. ಈ ಬಗ್ಗೆ ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಮಾಹಿತಿ ನೀಡಿದ್ದು, ನೇಹಾ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವಳ ನೆನಪಿಗಾಗಿ ನಾವು ಅಂಜುಮನ್‌ ಕಾಲೇಜಿನ ಒಂದು ಕೊಠಡಿಗೆ ನೇಹಾ ಹಿರೇಮಠ ಅವರ ಹೆಸರಿಡಲು ತೀರ್ಮಾನಿಸಿದ್ದೇವೆ. ಕೊಠಡಿಯನ್ನ ನೇಹ ತಂದೆ ತಾಯಿಯಿಂದಲೇ ಉದ್ಘಾಟನೆ ಮಾಡಿಸುತ್ತೇವೆ ಎಂದಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago