Mysore
23
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ: ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್‌

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ.

ನಾಳೆಯಿಂದ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ನೌಕರರು, ಹೊರ ರೋಗಿಗಳ ವಿಭಾಗ ಕರ್ತವ್ಯ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಲಿದ್ದಾರೆ.

ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದವರು ಕೂಡ ಬೆಂಬಲ ನೀಡಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿಯೂ ಮುಷ್ಕರ ನಡೆಸಲಾಗುತ್ತದೆ.

ಮಾರ್ಚ್.‌15ರವರೆಗೆ ವೈದ್ಯರು ಮತ್ತು ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ತುರ್ತು ಕರ್ತವ್ಯದಲ್ಲಿ ಭಾಗವಹಿಸಲಿದ್ದಾರೆ. ನಂತರವೂ ಸರ್ಕಾರದಿಂದ ಸ್ಪಂದನೆ ಸಿಗದಿದ್ದರೆ ಮಾರ್ಚ್.‌16ರಿಂದ ಕೆಲಸವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಿದ್ದಾರೆ.

Tags:
error: Content is protected !!