ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿದೆ.
ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವಿತರಣೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಪೌಷ್ಟಿಕ ಆಹಾರ ಯೋಜನೆಗೆ ಅಡ್ಡಿಯಾಗಬಾರದು ಎಂದು ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ ಮತ್ತು ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…