ರಾಜ್ಯ

ರಾಜ್ಯದಾದ್ಯಂತ ಸಾಕ್ಷರ ಸನ್ಮಾನ ಕಾರ್ಯಕ್ರಮ : 5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ

ಬೆಂಗಳೂರು:  ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

5 mins ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

11 mins ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ…

16 mins ago

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

39 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

59 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago