ರಾಜ್ಯ

ರಾಜ್ಯದಾದ್ಯಂತ ಸಾಕ್ಷರ ಸನ್ಮಾನ ಕಾರ್ಯಕ್ರಮ : 5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ

ಬೆಂಗಳೂರು:  ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

5 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

6 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

6 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

7 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

10 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

11 hours ago