ರಾಜ್ಯ

ರಾಜ್ಯದಾದ್ಯಂತ ಸಾಕ್ಷರ ಸನ್ಮಾನ ಕಾರ್ಯಕ್ರಮ : 5234 ಮಹಿಳಾ ಪಂಚಾಯತಿ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಂಕಲ್ಪ

ಬೆಂಗಳೂರು:  ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.

2024ರ ಸೆಪ್ಟೆಂಬರ್‌ 1ರಿಂದ ಅಕ್ಟೋಬರ್‌ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

33 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

34 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

36 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

38 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

46 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

53 mins ago