ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ನಗರದ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ರಾಜ್ಯ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿ ವಿಪಕ್ಷಗಳ ಕೈಗೆ ಕಾಂಗೆಸ್ ಅಸ್ತ್ರ ಕೊಟ್ಟಿದೆ. ಬಿಜೆಪಿಯ ಬೆಲೆ ಏರಿಕೆ ನೀತಿ ಖಂಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಗೆ ಇದೀಗ ಬೆಲೆ ಏರಿಕೆಯ ಸಂಕಷ್ಟ ತಂದಿದೆ.
ತೈಲ ದರ ಏರಿಕೆ ಇಳಿಕೆಗೆ ಒತ್ತಾಯಿಸಿ ಇಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಜೊತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಇನ್ನು ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…
ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…