ಬೆಂಗಳೂರು: ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಪೋರ್ಟಲ್ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, “ಯೋಜನೆಯಲ್ಲಿ ಪಾರದರ್ಶಕತೆ, ಸಾರ್ವಜನಿಕರಿಗೆ ಸುಲಭ ಮಾಹಿತಿ ಒದಗಿಸಲು ಈ ಹೊಸ ಆಯ್ಕೆಯನ್ನು ಪರಿಚಯಿಸಲಾಗಿದೆ,” ಎಂದು ತಿಳಿಸಿದರು.
“ಕರ್ನಾಟಕ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಾದ ‘ಗಂಗಾ ಕಲ್ಯಾಣ’ ಅಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಸಣ್ಣ/ಅತಿ ಸಣ್ಣ ರೈತರ ಭೂಮಿಯಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ಸೆಟ್ ಅಳವಡಿಸಿ, ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಕೊಳವೆ ಬಾವಿ ಕೊರೆದ ನಂತರ ವಿದ್ಯುತ್ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿಯಲು ಸಾಧ್ಯವಾಗುತ್ತಿರಲಿಲ್ಲ. ಈಗ ಪೋರ್ಟಲ್ ಅಲ್ಲೇ ಮಾಹಿತಿ ತಿಳಿಯಲು ಅವಕಾಶ ಕಲ್ಪಿಸಲಾಗಿದೆ. ರೈತ ಬಂಧುಗಳು ಈ ಸೇವೆಯ ಸದುಪಯೋಗ ಪಡೆಯಬೇಕು”, ಎಂದು ಸಚಿವರು ಹೇಳಿದರು.
“ಈ ವೈಶಿಷ್ಟ್ಯವು ಗಂಗಾ ಕಲ್ಯಾಣ ಯೋಜನೆಯ ಪೋರ್ಟಲ್ನಲ್ಲಿ ಲಭ್ಯವಿದ್ದು, ಮುಖಪುಟದಲ್ಲಿ ಒದಗಿಸಲಾದ ‘ಟ್ರ್ಯಾಕ್ ಅಪ್ಲಿಕೇಶನ್’ ಆಯ್ಕೆಯನ್ನು ಕ್ಲಿಕ್ ಮಾಡಿ ಪೂರಕ ವಿವರ ದಾಖಲಿಸಿದರೆ, ಫಲಾನುಭವಿಗಳು ತಮ್ಮ ಅರ್ಜಿಯ ಮಾಹಿತಿ ಪಡೆಯಬಹುದಾಗಿದೆ,” ಎಂದು ಹೇಳಿದರು.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…