ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ ನಡುವೆ ಒಪ್ಪಂದವಾಗಿದೆ ಎಂದು ತಿಳಿಸಿದರು.
ಕಾರ್ಖಾನೆ ನಿರ್ಮಾಣ ವಿರೋಧಿಸಿ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟ ಗಮನಿಸಿದ್ದೇನೆ. ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಕಾರ್ಖಾನೆ ನಿರ್ಮಿಸಿದರೆ ಪರಿಸರಕ್ಕೆ ಹಾನಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.
೩೦ ರಿಂದ ೩೫ ಸಾವಿರ ಎಕರೆ ಪ್ರದೇಶದಲ್ಲಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ. ಅಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಿದ್ದಾರೆ.
ಯಾವುದೇ ಸರ್ಕಾರಗಳು ಕಾರ್ಖಾನೆ ನಿರ್ಮಿಸುವಾಗ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಆರಂಭಿಸಬೇಕು. ಕೈಗಾರಿಕಾ ಸ್ಥಾಪನೆಗೆ ಕೇಂದ್ರದ ನೀತಿಯಿದ್ದು, ಅದು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಎಂದು ಹೇಳಿದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…