ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ ನಡುವೆ ಒಪ್ಪಂದವಾಗಿದೆ ಎಂದು ತಿಳಿಸಿದರು.
ಕಾರ್ಖಾನೆ ನಿರ್ಮಾಣ ವಿರೋಧಿಸಿ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟ ಗಮನಿಸಿದ್ದೇನೆ. ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಕಾರ್ಖಾನೆ ನಿರ್ಮಿಸಿದರೆ ಪರಿಸರಕ್ಕೆ ಹಾನಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.
೩೦ ರಿಂದ ೩೫ ಸಾವಿರ ಎಕರೆ ಪ್ರದೇಶದಲ್ಲಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ. ಅಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಿದ್ದಾರೆ.
ಯಾವುದೇ ಸರ್ಕಾರಗಳು ಕಾರ್ಖಾನೆ ನಿರ್ಮಿಸುವಾಗ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಆರಂಭಿಸಬೇಕು. ಕೈಗಾರಿಕಾ ಸ್ಥಾಪನೆಗೆ ಕೇಂದ್ರದ ನೀತಿಯಿದ್ದು, ಅದು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಎಂದು ಹೇಳಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…