ಕೊಪ್ಪಳ: ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿಯು ಉಕ್ಕಿನ ಕಾರ್ಖಾನೆ ಸ್ಥಾಪಿಸುವ ಸಂಬಂಧ ಕೇಂದ್ರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಲ್ಲಿ ಕೇಂದ್ರದ ಹಸ್ತಕ್ಷೇಪವೆನಿಲ್ಲ. ಕಾರ್ಖಾನೆ ಹಾಗೂ ರಾಜ್ಯ ಸರ್ಕಾರ ನಡುವೆ ಒಪ್ಪಂದವಾಗಿದೆ ಎಂದು ತಿಳಿಸಿದರು.
ಕಾರ್ಖಾನೆ ನಿರ್ಮಾಣ ವಿರೋಧಿಸಿ ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಹೋರಾಟ ಗಮನಿಸಿದ್ದೇನೆ. ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಇಲ್ಲಿ ಕಾರ್ಖಾನೆ ನಿರ್ಮಿಸಿದರೆ ಪರಿಸರಕ್ಕೆ ಹಾನಿಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ಹೇಳಿದರು.
೩೦ ರಿಂದ ೩೫ ಸಾವಿರ ಎಕರೆ ಪ್ರದೇಶದಲ್ಲಿ ಉಕ್ಕಿನ ಕಾರ್ಖಾನೆ ಮಾಡಿದ್ದಾರೆ. ಅಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಿದ್ದಾರೆ.
ಯಾವುದೇ ಸರ್ಕಾರಗಳು ಕಾರ್ಖಾನೆ ನಿರ್ಮಿಸುವಾಗ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಆರಂಭಿಸಬೇಕು. ಕೈಗಾರಿಕಾ ಸ್ಥಾಪನೆಗೆ ಕೇಂದ್ರದ ನೀತಿಯಿದ್ದು, ಅದು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…