ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಅವರು ದೂರಿದ್ದಾರೆ.
ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆ ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…