ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಅವರು ದೂರಿದ್ದಾರೆ.
ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆಯ ಅಗತ್ಯವಿದೆ. ಇದಕ್ಕಾಗಿ ಮೂರು ದಿನಗಳ ತುರ್ತು ಅಧಿವೇಶನ ಕರೆಯಬೇಕಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುಂಪು ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂತಹ ಘಟನೆ ತಪ್ಪಿಸಲು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಈ ತುರ್ತು ಅಧಿವೇಶನವು ರಾಜ್ಯ ಸರ್ಕಾರ ಬದ್ಧತೆಯನ್ನು ಜನರಿಗೆ ತೋರಿಸಲು ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ಘಟನೆಗೆ ಕಾರಣಗಳೇನು ಎಂಬುದನ್ನು ಜನತೆಗೆ ತಿಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…