ರಾಜ್ಯ

ಹಂತ ಹಂತವಾಗಿ ಸಮೀಕ್ಷೆ ಚುರುಕಾಗಿದೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಂತ ಹಂತವಾಗಿ ಚುರುಕುಗೊಳ್ಳುತ್ತಿದೆ. ಸರ್ವರ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಇಂದು ಸಂಜೆಯ ಒಳಗೆ ಇತ್ಯರ್ಥವಾಗಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ದಿನವಾದ ನಿನ್ನೆ 71 ಸಾವಿರ ಜನರ ಸಮೀಕ್ಷೆಯಾಗಿತ್ತು. ಇಂದು ಬೆಳಗ್ಗೆ ಮಾಹಿತಿ ತೆಗೆದುಕೊಂಡಾಗ ಎರಡು ಮೂರು ಗಂಟೆಯಲ್ಲೇ 1.93 ಲಕ್ಷ ಜನರ ಸಮೀಕ್ಷೆಯಾಗಿದೆ. ಪ್ರತಿ ದಿನ ಸರಾಸರಿ 10 ಲಕ್ಷ ಜನರ ಸಮೀಕ್ಷೆ ನಡೆಸುವ ಗುರಿಯಿದೆ ಎಂದು ಹೇಳಿದರು.

ಸರ್ವರ್‌ನಲ್ಲಿ ನಿಧಾನಗತಿಯ ಸಮಸ್ಯೆ ಇದ್ದು, ಅದನ್ನು ಸರಿಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಬಹುತೇಕ ಎಲ್ಲಾ ತೊಂದರೆಗಳು ನಿವಾರಣೆಯಾಗಲಿವೆ ಎಂದರು.
ಕಟ್ಟಕಡೆಯ ಮನುಷ್ಯನಿಗೂ ಸೌಲಭ್ಯ ಒದಗಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಇದು ಜಾತಿ ಜನಗಣತಿ ಅಲ್ಲ. ಸಮೀಕ್ಷೆಗಾಗಿ ಸಿದ್ಧಪಡಿಸಿರುವ 60 ಪ್ರಶ್ನೆಗಳಲ್ಲಿ ಜಾತಿಯೂ ಒಂದು. ಉಳಿದ 59 ಪ್ರಶ್ನೆಗಳ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ? ಎಂದು ಅವರು ಮರು ಪ್ರಶ್ನಿಸಿದರು.

ಇದನ್ನು ಓದಿ : ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಯಲಿದೆ: ಸಚಿವ ಶಿವರಾಜ್‌ ತಂಗಡಗಿ

ವಿರೋಧ ಪಕ್ಷಗಳಿಗೆ ಚರ್ಚೆ ಮಾಡಲು ಯಾವುದೇ ವಿಚಾರಗಳಿಲ್ಲ. ರಾಜ್ಯದಲ್ಲಿ ಎರಡೂವರೆ ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಜನ ಸಮೃದ್ಧಿಯಾಗಿದ್ದಾರೆ, ಕಾಂಗ್ರೆಸ್ ಪರವಾದ ಒಲವು ಹೊಂದಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿಯಾಗಿ ಅದರಿಂದ ಮತ್ತಷ್ಟು ಸೌಲಭ್ಯಗಳು ಸಿಕ್ಕರೆ, ಜನ ಕಾಂಗ್ರೆಸ್‍ನತ್ತ ವಾಲುತ್ತಾರೆ ಎಂಬ ಆತಂಕದಿಂದ ಬಿಜೆಪಿಯವರು ದಿನ ಬೆಳಗಾದರೆ ಸಮೀಕ್ಷೆಯನ್ನು ಟೀಕಿಸಲಾರಂಭಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಸಮೀಕ್ಷೆಯ ಮಾದರಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯಲ್ಲಿ ನಡೆಯುತ್ತಿದೆ. 1561 ಜಾತಿಗಳನ್ನು ಕ್ರೋಢಿಕರಿಸಿದ್ದು, ಸ್ವಯಂ ಪ್ರೇರಿತ ಅಲ್ಲ. ಈ ಹಿಂದೆ ಕಾಂತರಾಜು ಆಯೋಗದ ಸಮೀಕ್ಷೆಯಲ್ಲೇ ಧರ್ಮ ಹಾಗೂ ಉಪ ಜಾತಿಗಳ ಮಾಹಿತಿ ಇತ್ತು ಎಂದು ಹೇಳಿದರು.

ಆರಂಭಿಕ ಹಂತದಲ್ಲಿ ಒಂದಿಷ್ಟು ಸಮಸ್ಯೆಗಳಿದ್ದವು. ಎಲ್ಲವನ್ನೂ ಸರಿಪಡಿಸಲಾಗುತ್ತಿದೆ. ಈಗ ಸಮೀಕ್ಷೆ ಸುಲಲಿತವಾಗಿ ನಡೆಯುತ್ತಿದೆ. ಅ.7ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಒಂದು ವೇಳೆ ನಿಗದಿತ ವೇಳೆಗೆ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ಆ ಸಂದರ್ಭದಲ್ಲಿ ಕಾಲಾವಧಿಯ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago