ರಾಜ್ಯ

ಹಂತ ಹಂತವಾಗಿ ಸಮೀಕ್ಷೆ ಚುರುಕಾಗಿದೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಂತ ಹಂತವಾಗಿ ಚುರುಕುಗೊಳ್ಳುತ್ತಿದೆ. ಸರ್ವರ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಇಂದು ಸಂಜೆಯ ಒಳಗೆ ಇತ್ಯರ್ಥವಾಗಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ದಿನವಾದ ನಿನ್ನೆ 71 ಸಾವಿರ ಜನರ ಸಮೀಕ್ಷೆಯಾಗಿತ್ತು. ಇಂದು ಬೆಳಗ್ಗೆ ಮಾಹಿತಿ ತೆಗೆದುಕೊಂಡಾಗ ಎರಡು ಮೂರು ಗಂಟೆಯಲ್ಲೇ 1.93 ಲಕ್ಷ ಜನರ ಸಮೀಕ್ಷೆಯಾಗಿದೆ. ಪ್ರತಿ ದಿನ ಸರಾಸರಿ 10 ಲಕ್ಷ ಜನರ ಸಮೀಕ್ಷೆ ನಡೆಸುವ ಗುರಿಯಿದೆ ಎಂದು ಹೇಳಿದರು.

ಸರ್ವರ್‌ನಲ್ಲಿ ನಿಧಾನಗತಿಯ ಸಮಸ್ಯೆ ಇದ್ದು, ಅದನ್ನು ಸರಿಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಬಹುತೇಕ ಎಲ್ಲಾ ತೊಂದರೆಗಳು ನಿವಾರಣೆಯಾಗಲಿವೆ ಎಂದರು.
ಕಟ್ಟಕಡೆಯ ಮನುಷ್ಯನಿಗೂ ಸೌಲಭ್ಯ ಒದಗಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಇದು ಜಾತಿ ಜನಗಣತಿ ಅಲ್ಲ. ಸಮೀಕ್ಷೆಗಾಗಿ ಸಿದ್ಧಪಡಿಸಿರುವ 60 ಪ್ರಶ್ನೆಗಳಲ್ಲಿ ಜಾತಿಯೂ ಒಂದು. ಉಳಿದ 59 ಪ್ರಶ್ನೆಗಳ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ? ಎಂದು ಅವರು ಮರು ಪ್ರಶ್ನಿಸಿದರು.

ಇದನ್ನು ಓದಿ : ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಯಲಿದೆ: ಸಚಿವ ಶಿವರಾಜ್‌ ತಂಗಡಗಿ

ವಿರೋಧ ಪಕ್ಷಗಳಿಗೆ ಚರ್ಚೆ ಮಾಡಲು ಯಾವುದೇ ವಿಚಾರಗಳಿಲ್ಲ. ರಾಜ್ಯದಲ್ಲಿ ಎರಡೂವರೆ ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಜನ ಸಮೃದ್ಧಿಯಾಗಿದ್ದಾರೆ, ಕಾಂಗ್ರೆಸ್ ಪರವಾದ ಒಲವು ಹೊಂದಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿಯಾಗಿ ಅದರಿಂದ ಮತ್ತಷ್ಟು ಸೌಲಭ್ಯಗಳು ಸಿಕ್ಕರೆ, ಜನ ಕಾಂಗ್ರೆಸ್‍ನತ್ತ ವಾಲುತ್ತಾರೆ ಎಂಬ ಆತಂಕದಿಂದ ಬಿಜೆಪಿಯವರು ದಿನ ಬೆಳಗಾದರೆ ಸಮೀಕ್ಷೆಯನ್ನು ಟೀಕಿಸಲಾರಂಭಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಸಮೀಕ್ಷೆಯ ಮಾದರಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯಲ್ಲಿ ನಡೆಯುತ್ತಿದೆ. 1561 ಜಾತಿಗಳನ್ನು ಕ್ರೋಢಿಕರಿಸಿದ್ದು, ಸ್ವಯಂ ಪ್ರೇರಿತ ಅಲ್ಲ. ಈ ಹಿಂದೆ ಕಾಂತರಾಜು ಆಯೋಗದ ಸಮೀಕ್ಷೆಯಲ್ಲೇ ಧರ್ಮ ಹಾಗೂ ಉಪ ಜಾತಿಗಳ ಮಾಹಿತಿ ಇತ್ತು ಎಂದು ಹೇಳಿದರು.

ಆರಂಭಿಕ ಹಂತದಲ್ಲಿ ಒಂದಿಷ್ಟು ಸಮಸ್ಯೆಗಳಿದ್ದವು. ಎಲ್ಲವನ್ನೂ ಸರಿಪಡಿಸಲಾಗುತ್ತಿದೆ. ಈಗ ಸಮೀಕ್ಷೆ ಸುಲಲಿತವಾಗಿ ನಡೆಯುತ್ತಿದೆ. ಅ.7ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಒಂದು ವೇಳೆ ನಿಗದಿತ ವೇಳೆಗೆ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ಆ ಸಂದರ್ಭದಲ್ಲಿ ಕಾಲಾವಧಿಯ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 mins ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

14 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

2 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

4 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

4 hours ago