ರಾಜ್ಯ

ಹಂತ ಹಂತವಾಗಿ ಸಮೀಕ್ಷೆ ಚುರುಕಾಗಿದೆ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹಂತ ಹಂತವಾಗಿ ಚುರುಕುಗೊಳ್ಳುತ್ತಿದೆ. ಸರ್ವರ್ ಸೇರಿದಂತೆ ಹಲವು ರೀತಿಯ ಸಮಸ್ಯೆಗಳು ಇಂದು ಸಂಜೆಯ ಒಳಗೆ ಇತ್ಯರ್ಥವಾಗಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ದಿನವಾದ ನಿನ್ನೆ 71 ಸಾವಿರ ಜನರ ಸಮೀಕ್ಷೆಯಾಗಿತ್ತು. ಇಂದು ಬೆಳಗ್ಗೆ ಮಾಹಿತಿ ತೆಗೆದುಕೊಂಡಾಗ ಎರಡು ಮೂರು ಗಂಟೆಯಲ್ಲೇ 1.93 ಲಕ್ಷ ಜನರ ಸಮೀಕ್ಷೆಯಾಗಿದೆ. ಪ್ರತಿ ದಿನ ಸರಾಸರಿ 10 ಲಕ್ಷ ಜನರ ಸಮೀಕ್ಷೆ ನಡೆಸುವ ಗುರಿಯಿದೆ ಎಂದು ಹೇಳಿದರು.

ಸರ್ವರ್‌ನಲ್ಲಿ ನಿಧಾನಗತಿಯ ಸಮಸ್ಯೆ ಇದ್ದು, ಅದನ್ನು ಸರಿಪಡಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಬಹುತೇಕ ಎಲ್ಲಾ ತೊಂದರೆಗಳು ನಿವಾರಣೆಯಾಗಲಿವೆ ಎಂದರು.
ಕಟ್ಟಕಡೆಯ ಮನುಷ್ಯನಿಗೂ ಸೌಲಭ್ಯ ಒದಗಿಸಬೇಕೆಂಬ ಉದ್ದೇಶದಿಂದ ಸರ್ಕಾರ ಸಮೀಕ್ಷೆ ಮಾಡುತ್ತಿದೆ. ಇದು ಜಾತಿ ಜನಗಣತಿ ಅಲ್ಲ. ಸಮೀಕ್ಷೆಗಾಗಿ ಸಿದ್ಧಪಡಿಸಿರುವ 60 ಪ್ರಶ್ನೆಗಳಲ್ಲಿ ಜಾತಿಯೂ ಒಂದು. ಉಳಿದ 59 ಪ್ರಶ್ನೆಗಳ ಬಗ್ಗೆ ಏಕೆ ಚರ್ಚೆಯಾಗುತ್ತಿಲ್ಲ? ಎಂದು ಅವರು ಮರು ಪ್ರಶ್ನಿಸಿದರು.

ಇದನ್ನು ಓದಿ : ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಯಲಿದೆ: ಸಚಿವ ಶಿವರಾಜ್‌ ತಂಗಡಗಿ

ವಿರೋಧ ಪಕ್ಷಗಳಿಗೆ ಚರ್ಚೆ ಮಾಡಲು ಯಾವುದೇ ವಿಚಾರಗಳಿಲ್ಲ. ರಾಜ್ಯದಲ್ಲಿ ಎರಡೂವರೆ ವರ್ಷ ಕಾಂಗ್ರೆಸ್ ಆಡಳಿತದಲ್ಲಿ ಜನ ಸಮೃದ್ಧಿಯಾಗಿದ್ದಾರೆ, ಕಾಂಗ್ರೆಸ್ ಪರವಾದ ಒಲವು ಹೊಂದಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಶಸ್ವಿಯಾಗಿ ಅದರಿಂದ ಮತ್ತಷ್ಟು ಸೌಲಭ್ಯಗಳು ಸಿಕ್ಕರೆ, ಜನ ಕಾಂಗ್ರೆಸ್‍ನತ್ತ ವಾಲುತ್ತಾರೆ ಎಂಬ ಆತಂಕದಿಂದ ಬಿಜೆಪಿಯವರು ದಿನ ಬೆಳಗಾದರೆ ಸಮೀಕ್ಷೆಯನ್ನು ಟೀಕಿಸಲಾರಂಭಿಸಿದ್ದಾರೆ ಎಂದು ತಿರುಗೇಟು ನೀಡಿದರು.

ಸಮೀಕ್ಷೆಯ ಮಾದರಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯಲ್ಲಿ ನಡೆಯುತ್ತಿದೆ. 1561 ಜಾತಿಗಳನ್ನು ಕ್ರೋಢಿಕರಿಸಿದ್ದು, ಸ್ವಯಂ ಪ್ರೇರಿತ ಅಲ್ಲ. ಈ ಹಿಂದೆ ಕಾಂತರಾಜು ಆಯೋಗದ ಸಮೀಕ್ಷೆಯಲ್ಲೇ ಧರ್ಮ ಹಾಗೂ ಉಪ ಜಾತಿಗಳ ಮಾಹಿತಿ ಇತ್ತು ಎಂದು ಹೇಳಿದರು.

ಆರಂಭಿಕ ಹಂತದಲ್ಲಿ ಒಂದಿಷ್ಟು ಸಮಸ್ಯೆಗಳಿದ್ದವು. ಎಲ್ಲವನ್ನೂ ಸರಿಪಡಿಸಲಾಗುತ್ತಿದೆ. ಈಗ ಸಮೀಕ್ಷೆ ಸುಲಲಿತವಾಗಿ ನಡೆಯುತ್ತಿದೆ. ಅ.7ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಒಂದು ವೇಳೆ ನಿಗದಿತ ವೇಳೆಗೆ ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ಆ ಸಂದರ್ಭದಲ್ಲಿ ಕಾಲಾವಧಿಯ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

1 hour ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

13 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

13 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

13 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

13 hours ago