ರಾಜ್ಯ

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‍ಪುರಿ ಅವರು ದೇಶದಲ್ಲಿ ಸಿಲಿಂಡರ್ ಪೂರೈಕೆಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ತಕ್ಷಣವೇ ಕ್ರಮ ಕೈಗೊಳ್ಳಲಿ ಎಂದರು.

ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ ಎರಡೂ ಕಡೆ ಈ ಬಗ್ಗೆ ಚರ್ಚೆಯಾಗಿದೆ. ಸರ್ಕಾರ ಉತ್ತರವನ್ನೂ ನೀಡಿದೆ. ನಾನೂ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಿಲಿಂಡರ್ ಅಭಾವವನ್ನು ಬಗೆಹರಿಸುವಂತೆ ಮನವಿ ಮಾಡಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ದೇಶದ ಯಾವುದೇ ರಾಜ್ಯದಲ್ಲೂ ಸಿಲಿಂಡರ್ ಪೂರೈಕೆ ಸಮಸ್ಯೆಯಿಲ್ಲ, ಕರ್ನಾಟಕದಲ್ಲಿ ಮಾತ್ರ ಏಕೆ? ಎಂದು ಪ್ರಶ್ನಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿರಬಹುದು ಎಂದರು.

ಕೇಂದ್ರ ಸರ್ಕಾರ ಸಮರ್ಪಕವಾಗಿ ಸಿಲಿಂಡರ್ ಪೂರೈಸಿದರೆ, ನಾವು ಜನರಿಗೆ ತಲುಪಿಸುತ್ತೇವೆ. ಸಿಲಿಂಡರ್‌ಗಳನ್ನು ಇಟ್ಟುಕೊಂಡು ನಾವು ಏನು ಮಾಡಲು ಸಾಧ್ಯ? ಎಂದು ಮರು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಬೇರೆ ದೇಶಗಳಿಂದ ಸಿಲಿಂಡರ್‌ಗಳನ್ನು ಆಮದು ಮಾಡಿಕೊಂಡು ದೇಶದಲ್ಲಿ ಸೃಷ್ಟಿಯಾಗಿರುವ ಅಭಾವವನ್ನು ಸರಿದೂಗಿಸಬೇಕು. ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಿಗೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾದರೆ ಭಾರೀ ಸಮಸ್ಯೆಯಾಗಲಿದೆ. ಈ ಉದ್ಯಮವನ್ನು ನಂಬಿಕೊಂಡು ಬಹಳಷ್ಟು ಮಂದಿ ಇದ್ದಾರೆ. ಅವರೆಲ್ಲ ತೊಂದರೆಗೆ ಸಿಲುಕಲಿದ್ದಾರೆ ಎಂದು ಎಚ್ಚರಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 07 ಶುಕ್ರವಾರ  

18 mins ago

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

11 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

12 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

12 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

12 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

12 hours ago