ರಾಜ್ಯ

ಬೆಂಗಳೂರಿನ ಶ್ವಾಸತಾಣಗಳ ಸಂರಕ್ಷಣೆ, ಸಂವರ್ಧನೆಗೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ವಿತರೀತ ಬಿಸಿ ಮತ್ತು ಬೆಂಗಳೂರಿನ ಮೇಲೆ ಅದರ ಪರಿಣಾಮ ಕುರಿತ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕ್ರಿಯಾ ಯೋಜನೆಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾರಿಗೆ ತರಲು ಪರಿಸರ ಇಲಾಖೆ ವ್ಯಾಪ್ತಿಗೆ ಒಳಪಡುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಕ್ರಮ ಕೈಗೊಂಡಿದೆ ಎಂದರು.

ಜಿಲ್ಲಾ ಪಂಚಾಯತ್ ಕಚೇರಿಗಳ ಸಹಯೋಗದೊಂದಿಗೆ ಕೆಎಸ್ಎಪಿಸಿಸಿ ಅನುಷ್ಠಾನ ಮತ್ತು ಅದರ ಪ್ರಗತಿಯ ಕುರಿತು ಜಿಲ್ಲಾ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.

ಹವಾಮಾನ ಚೇತರಿಕೆಗೆ ಸಂಬಂಧಿಸಿದಂತೆ ಉತ್ತಮ ರೂಢಿಗಳ ಮಾಹಿತಿಯನ್ನು ಹಂಚಿಕೊಳ್ಳಲು ಏಪ್ರಿಲ್.2025 ರಲ್ಲಿ ಸಮರ್ಪಿತ ರೇಡಿಯೋ ಕಾರ್ಯಕ್ರಮ ಹವಾಮಾನ ಮಿತ್ರ ಪ್ರಾರಂಭಿಸಲಾಗಿದ್ದು, ಈವರೆಗೆ 24 ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗಿದೆ. ಈ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನಗಳು ನಡೆದಿವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

5 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

5 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

5 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

5 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

8 hours ago