anjandri development meeting
ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಯಿತು. ಸಭೆಯಲ್ಲಿ ವಯಸ್ಕರೂ ಅಂಜನಾದ್ರಿ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ಇದನ್ನು ಓದಿ:ಚಾಮುಂಡಿ ಯದುವಂಶದ ಕುಲದೇವಿ : ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾದಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿದಂತೆ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.
ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.
ಇದನ್ನು ಓದಿ:ಧರ್ಮಸ್ಥಳ ಪ್ರಕರಣವನ್ನು ಎನ್ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ
ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.
ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಿದೆ ಎಂದು ಹೇಳಿದರು.
ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…