ರಾಜ್ಯ

ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಯಿತು. ಸಭೆಯಲ್ಲಿ ವಯಸ್ಕರೂ ಅಂಜನಾದ್ರಿ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ಇದನ್ನು ಓದಿ:ಚಾಮುಂಡಿ ಯದುವಂಶದ ಕುಲದೇವಿ : ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌

ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾದಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿದಂತೆ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.

ಇದನ್ನು ಓದಿ:ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.

ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಿದೆ ಎಂದು ಹೇಳಿದರು.

ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago