ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ಗ್ರಾಮಸ್ಥರ ನಿಯೋಗವು ಕಾಡಾನೆ ಸೆರೆ, ಕಾಡುಕೋಣ ಮತ್ತು ಕಾಡುಹಂದಿಗಳ ಉಪಟಳ ನಿಯಂತ್ರಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 2011ರಲ್ಲಿ ಹಳ್ಳಿಗಳನ್ನೂ ಬಫರ್ ವಲಯದಲ್ಲಿ ಸೇರಿಸಲಾಗಿದೆ. ಅದೇ ರೀತಿ ಹಿಂದಿನ ಬಿಜೆಪಿ ಸರ್ಕಾರ ಡೀಮ್ಡ್ ಅರಣ್ಯ ವಿಚಾರದಲ್ಲೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸದೆ, ಸಲ್ಲಿಸಿರುವ ಪ್ರಮಾಣ ಪತ್ರದಿಂದ ಗೊಂದಲವಾಗಿದ್ದು, ಈಗ ಆ ಸಮಸ್ಯೆಯನ್ನೂ ಪರಿಹರಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
2022ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕುಳಿತಲ್ಲೇ ಮನೆ, ಪಟ್ಟಾ ಜಮೀನು, ಸರ್ಕಾರಿ ಕಚೇರಿ, ಶಾಲೆ, ಆಸ್ಪತ್ರೆ ಎಲ್ಲವನ್ನೂ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿಸಿದ್ದಾರೆ. ಈಗ ಎಲ್ಲೆಲ್ಲಿ ಇಂತಹ ಸಮಸ್ಯೆ ಇದೆಯೋ ಅದಕ್ಕೆ ಪರ್ಯಾಯವಾಗಿ ಬೇರೆ ಭೂಮಿ ಗುರುತಿಸಿ, ಡೀಮ್ಡ್ 2ರಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಅರಣ್ಯ ಪ್ರದೇಶದ ಪ್ರಮಾಣ ಉಳಿಸಿಕೊಂಡು ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.
ಶೃಂಗೇರಿ ಶಾಸಕ ರಾಜೇಗೌಡ, ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…