ರಾಜ್ಯ

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಮೀಸಲಾತಿಯನ್ವಯ ನ್ಯಾಯಬೆಲೆ ಅಂಗಡಿಗಳನ್ನು ವಿಕೇಂದ್ರಿಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 20460 ನ್ಯಾಯಬೆಲೆ ಅಂಗಡಿಗಳಿದ್ದು, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದವರಿಗೆ 1473 ಅಂಗಡಿಗಳು ಮಾತ್ರ ಇವೆ ಎಂದು ಹೇಳಿದರು.

ಇದನ್ನು ಓದಿ: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಕರ್ನಾಟಕ ಅಗತ್ಯವಸ್ತುಗಳ ಕಾಯ್ದೆಯಡಿ ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೇ.10 ರಷ್ಟು ಎಸ್‌ಸಿ, ಎಸ್‌ಟಿ ಜನಸಂಖ್ಯೆ ಇರುವ ಕಡೆಗಳಲ್ಲಿ ಆ ವರ್ಗದವರಿಗೆ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ಅಧಿಕಾರ ನೀಡಲಾಗಿದೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಾಲಿಕೆ ಆಯುಕ್ತರು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಆಹಾರ ಇಲಾಖೆಯ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

4 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

4 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

5 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

5 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

5 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

5 hours ago