ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಮೀಸಲಾತಿಯನ್ವಯ ನ್ಯಾಯಬೆಲೆ ಅಂಗಡಿಗಳನ್ನು ವಿಕೇಂದ್ರಿಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 20460 ನ್ಯಾಯಬೆಲೆ ಅಂಗಡಿಗಳಿದ್ದು, ಎಸ್ಸಿ, ಎಸ್ಟಿ ಸಮುದಾಯಗಳಿಗೆ ಸೇರಿದವರಿಗೆ 1473 ಅಂಗಡಿಗಳು ಮಾತ್ರ ಇವೆ ಎಂದು ಹೇಳಿದರು.
ಇದನ್ನು ಓದಿ: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ
ಕರ್ನಾಟಕ ಅಗತ್ಯವಸ್ತುಗಳ ಕಾಯ್ದೆಯಡಿ ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೇ.10 ರಷ್ಟು ಎಸ್ಸಿ, ಎಸ್ಟಿ ಜನಸಂಖ್ಯೆ ಇರುವ ಕಡೆಗಳಲ್ಲಿ ಆ ವರ್ಗದವರಿಗೆ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ಅಧಿಕಾರ ನೀಡಲಾಗಿದೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಾಲಿಕೆ ಆಯುಕ್ತರು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಆಹಾರ ಇಲಾಖೆಯ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…