DK Shivakumar
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೆ ಸಚಿವ ಸಂಪುಟದಿಂದ ಒಪ್ಪಿಗೆ ಕೊಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಾವು ಬೆಂಗಳೂರು ಅಭಿವೃದ್ಧಿ ಸಚಿವರಾದ ಬಳಿಕ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರಿಗೆ ದಿನೇ ದಿನೇ ವಲಸೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಅದನ್ನು ತಡೆಯಲು ಸಾಧ್ಯವಿಲ್ಲ. ಆದರೆ ಸೌಲಭ್ಯಗಳ ಸುಧಾರಣೆಗೆ ಆದ್ಯತೆ ನೀಡುತ್ತಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಈಗಾಗಲೇ ಕಾವೇರಿಯ 5ನೇ ಹಂತವನ್ನು ಜಾರಿಗೊಳಿಸಲಾಗಿದೆ.
ಬಹುತೇಕ ಎಲ್ಲಾ ಸಂಪರ್ಕಗಳನ್ನು ಕಲ್ಪಿಸಲಾಗಿದೆ. ಕಾವೇರಿ ನೀರು ಪೂರೈಕೆಯ 6ನೇ ಹಂತದ ಪ್ರಸ್ತಾವನೆಯೂ ಸರ್ಕರದ ಮುಂದಿದೆ. ಅದಕ್ಕೂ ಶೀಘ್ರವೇ ಸಂಪುಟದಲ್ಲಿ ಅನುಮೋದನೆ ಕೊಡಿಸಲಾಗುವುದು ಎಂದರು.
ಜಲಮಂಡಳಿಯಿಂದ ನೆನೆಗುದಿಗೆ ಬಿದ್ದಿರುವ ನೀರು ಪೂರೈಕೆ ಸಂಪರ್ಕಗಳನ್ನು ಮರು ಸಕ್ರಿಯೆಗೊಳಿಸಲು ಬಡ್ಡಿ ಮನ್ನಾದೊಂದಿಗೆ ಏಕಕಂತು ತಿರುವಳಿ ಯೋಜನೆಯನ್ನು ಯುಗಾದಿ ಹಬ್ಬದ ಕೊಡುಗೆಯಾಗಿ ನಾಗರಿಕರಿಗೆ ನೀಡಲಾಗಿದೆ. ಅಸಲು ಪಾವತಿಸಿ ಬಡ್ಡಿ ಮನ್ನಾ ಸೌಲಭ್ಯಗಳೊಂದಿಗೆ ನಾಗರಿಕರು ಅನುಕೂಲ ಪಡೆದುಕೊಳ್ಳಬಹುದು ಎಂದು ಹೇಳಿದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…