ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಇರುವವರು ರಾಜಕೀಯದಲ್ಲಿ ಧರ್ಮ ತಂದು ಜನರ ನೆಮ್ಮದಿಗೆ ಧಕ್ಕೆ ತರುವುದು ಸರಿಯಲ್ಲ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ಷೇಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತೀಯ ತೀವ್ರವಾದಿಗಳು ಯಾವುದೇ ಧರ್ಮದಲ್ಲಿದ್ದರೂ ಖಂಡನೀಯ. ಧಾರ್ಮಿಕ ಆಚರಣೆಯನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡಿ ಗೊಂದಲ ಮೂಡಿಸುವುದು ಸರಿಯಲ್ಲ ಎಂದರು.
ಸಾರ್ವಜನಿಕ ಜೀವನದಲ್ಲಿ ಇರುವವರು ಅಳೆದು, ತೂಗಿ ಮಾತನಾಡಬೇಕು. ಕಲ್ಲು ತೂರಾಟವನ್ನು ಯಾರೇ ಮಾಡಿದ್ದರೂ ಖಂಡನೀಯ, ಶಿಕ್ಷಾರ್ಹ ಅಪರಾಧ. ಆ ರೀತಿ ಚಟುವಟಿಕೆಗಳನ್ನು ಸರ್ಕಾರ ಉಕ್ಕಿನ ಕೈಗಳಿಂದ ನಿಯಂತ್ರಿಸಲಿದೆ ಎಂದರು.
ಮೂಲಭೂತವಾದಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಎಂಬ ಧೈರ್ಯಕ್ಕೆ ದುಷ್ಕರ್ಮಿಗಳು ಗಲಭೆ ಮಾಡುತ್ತಿದ್ದಾರೆ ಎಂಬ ವಾದವನ್ನು ಅಲ್ಲಗಳೆದ ಮಹದೇವಪ್ಪ ಅವರು, ಕ್ರಿಮಿನಲ್ಗಳ ವಿರುದ್ಧದ ಯಾವ ಪ್ರಕರಣವನ್ನೂ ನಮ್ಮ ಸರ್ಕಾರ ಹಿಂದೆ ಪಡೆದಿಲ್ಲ. ಬಿಜೆಪಿಯವರು ಧರ್ಮದ ಆಧಾರದ ಮೇಲೆ ಪ್ರಕರಣಗಳನ್ನು ಹಿಂಪಡೆದಿದ್ದಾರೆ ಎಂದು ತಿರುಗೇಟು ನೀಡಿದರು.
ಗಲಭೆ ಮಾಡುವವರ ವಿರುದ್ಧದ ಕೇಸುಗಳನ್ನು ಹಿಂದೆ ತೆಗೆದುಕೊಂಡಿಲ್ಲ. ಎಲ್ಲಾ ಸರ್ಕಾರಗಳು ಸಾರ್ವಜನಿಕ ಹೋರಾಟದಲ್ಲಿ ಭಾಗವಹಿಸಿದ್ದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತವೆ. ನಮ್ಮ ಸರ್ಕಾರವೂ ಅದೇ ರೀತಿ ಕ್ರಮ ಕೈಗೊಂಡಿದೆ ಎಂದರು.
ಮತೀಯ ಶಕ್ತಿಗಳಿಗೆ ಅಭಿವೃದ್ಧಿ ಬೇಕಿಲ್ಲ. ಜನರ ನೆಮ್ಮದಿ ಹಾಳು ಮಾಡುವುದೇ ಅವರ ಮೂಲ ಉದ್ದೇಶ, ಸೌಹಾರ್ದತೆಗೆ ಧಕ್ಕೆ ತರುವುದರಿಂದ ಜನರ ನೆಮ್ಮದಿಗೆ ಭಂಗ ತರುವುದರಿಂದ ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಯತ್ನಿಸಲಾಗುತ್ತದೆ ಎಂದರು.
ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ಗೆ ಅವಕಾಶ ನೀಡಬಾರದು ಎಂದು ಬಿಜೆಪಿ ಮಾಜಿ ಸಂಸದ ಹೈಕೋರ್ಟ್ ಮೆಟ್ಟಿಲೇರಿರುವುದು ಸರಿಯಲ್ಲ. ನಾಡಹಬ್ಬದಂತಹ ಸಂದರ್ಭದಲ್ಲಿ ಧರ್ಮ, ಜಾತಿ ರಾಜಕೀಯ ಬೆರೆಸಬಾರದು. ನಾಲ್ವಡಿ ಕೃಷ್ಣರಾಜ ಒಡೆಯರ್ ನೇತೃತ್ವದಲ್ಲಿ ಆಧುನಿಕ ಮೈಸೂರು ನಿರ್ಮಾಣ ಮಾಡುವುದರಲ್ಲಿ ಮಿರ್ಜಾ ಇಸಾಯಿಲ್ ಮಹತ್ವದ ಕೊಡುಗೆ ನೀಡಿದ್ದಾರೆ. ಟಿಪ್ಪು ಸುಲ್ತಾನ್ ಆಡಳಿತದಲ್ಲಿ ಪೂರ್ಣಯ್ಯ ದಿವಾನರಾಗಿದ್ದರೂ, ನಮ್ಮ ನಾಡು ಮೊದಲಿನಿಂದಲೂ ಸೌಹಾರ್ದತೆಗೆ ಹೆಸರುವಾಸಿಯಾಗಿದೆ ಎಂದರು.
ಪತ್ರಕರ್ತ, ಸಂಸದರಾಗಿದ್ದ ಪ್ರತಾಪ್ ಸಿಂಹ ತೀವ್ರಗಾಮಿಯಾಗಿ ಬದಲಾಗಿರುವುದು ದುರಾದೃಷ್ಟಕರ. ಬಾನು ಮುಷ್ತಾಕ್ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯಕ್ಕೆ, ದೇಶಕ್ಕೆ ಕೀರ್ತಿ ತಂದುಕೊಟ್ಟಿಲ್ಲವೇ ? ದಸರಾ ಒಂದು ಧರ್ಮಕ್ಕೆ ಮಾತ್ರ ಸೀಮಿತವೇ ಎಂದು ಪ್ರಶ್ನಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…