ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹೆಚ್ಚಗುತ್ತಲೆ ಇದೆ. ನೀವು ನೀಡುವ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಿ, ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಆಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಈ ವಿಷಯವಾಗಿ ಸದನದಲ್ಲಿ ಸರ್ಕಾರದ ಕಿವಿ ಹಿಂಡಿದ್ದೆವು ಆದರೂ ಏನು ಪ್ರಯೋಜನವಾಗಲಿಲ್ಲ. ಹೆರಿಗೆಗೆಂದು ಆಸ್ಪತ್ರೆಗೆ ಹೋದ ಗರ್ಭಿಣಿಯರು ಶವವಾಗುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿಗಳ ವಿರುದ್ಧ ದೆಹಲಿಯಲ್ಲಿ ದೂರು ನೀಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
ಗೃಹಲಕ್ಷ್ಮೀ ಯೋಜನೆಯಿಂದ ಹೊಲಿಗೆ ಯಂತ್ರ ಖರೀದಿಸಿದರು, ಬೋರ್ವೆಲ್ ಕೊರೆಸಿದರು, ಗ್ರಂಥಾಲಯ ತೆಗೆದರು ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದೀರಾ. ನಮಗೆ ನಿಮ್ಮ ಯೋಜನೆಯ 2 ಸಾವಿರ ರೂ. ಹಣ ಬೇಡ ಬಾಣಂತಿಯರ ಸರಣೀ ಸಾವು ನಿಲ್ಲಿಸಿ. ಹಾಗೆಯೇ ಈಲ್ಲಿವರೆಗೂ ಆಗಿರುವ ಬಾಣಂತಿಯರ ಸರಣಿ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಆಗ್ರಹಿಸಿದರು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…