ರಾಜ್ಯ

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ :ಡಾ‌ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ(ಜೂ.12) ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು. ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೋಮಿಯೋಪತಿ ಹಾಗು ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು.

ಇದಕ್ಕೆ ಸಚಿವರು ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಪಾಟೀಲ್  ಪುನರುಚ್ಚರಿಸಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

15 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

40 mins ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

58 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

1 hour ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

2 hours ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

3 hours ago