ರಾಜ್ಯ

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ :ಡಾ‌ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ(ಜೂ.12) ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು. ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೋಮಿಯೋಪತಿ ಹಾಗು ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು.

ಇದಕ್ಕೆ ಸಚಿವರು ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಪಾಟೀಲ್  ಪುನರುಚ್ಚರಿಸಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

1 hour ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

16 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

19 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

20 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

21 hours ago