ರಾಜ್ಯ

ಪೊಲೀಸ್‌ ಸಹಾಯವಾಣಿ ಅನಗತ್ಯ ಕರೆ ಮಾಡಿದ್ದಲ್ಲಿ ಕಠಿಣ ಕ್ರಮ

ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್‌ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್‌ ಸೆಂಟರ್‌ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಇಲಾಖೆ ಕಳವಳ ವ್ಯಕ್ತಪಡಿಸಿದೆ.

ನೀವು ಟೈಂಪಾಸ್‌ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ. ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್‌ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್‌ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್‌ ಕಾಲ್‌ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಲ್ದಾರೆ ಅರಣ್ಯ ಮಾರ್ಗದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ

ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…

8 mins ago

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

1 hour ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

1 hour ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

2 hours ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

2 hours ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

3 hours ago