ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್ ಸೆಂಟರ್ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಇಲಾಖೆ ಕಳವಳ ವ್ಯಕ್ತಪಡಿಸಿದೆ.
ನೀವು ಟೈಂಪಾಸ್ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ. ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್ ಕಾಲ್ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…