ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್ ಸೆಂಟರ್ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಇಲಾಖೆ ಕಳವಳ ವ್ಯಕ್ತಪಡಿಸಿದೆ.
ನೀವು ಟೈಂಪಾಸ್ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ. ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್ ಕಾಲ್ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…