ರಾಜ್ಯ

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗೆ ಕಡಿವಾಣ ಪಕ್ಕಾ: ವಿಧಾನಸಭೆಯಲ್ಲಿ ಗಂಭೀರ ಚರ್ಚೆ

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ ಮಾದಕ‌ ವಸ್ತುಗಳ ವ್ಯಸನಕ್ಕಿಂತ ಹೆಚ್ಚು ಹಾನಿಯನ್ನು ಆನ್‍ಲೈನ್ ಗೇಮ್‍ಗಳು ಮಾಡುತ್ತಿವೆ. ಇದರ ನಿಯಂತ್ರಣಕ್ಕಾಗಿ 2021ರಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತ ಗೇಮಿಂಗ್ ಒಕ್ಕೂಟ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. 2022ರಲ್ಲಿ ಈ ತಿದ್ದುಪಡಿ ಕಾಯ್ದೆ ರದ್ದಾಗಿದೆ. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದರು.

ಕಂಪ್ಯೂಟರ್, ಮೊಬೈಲ್ ಆಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿ ಆನ್‍ಲೈನ್ ಗೇಮ್ ಆಡುವುದನ್ನು ಕಾಯ್ದೆ ವ್ಯಾಪ್ತಿಗೆ ತರಲಾಗಿದೆ. ಕಳೆದ ಏ.8ರಂದು ಆನ್‍ಲೈನ್ ಗೇಮ್ ನಡೆಸುವವರ ಸಭೆ ನಡೆಸಿ ನಿಯಂತ್ರಣ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಅವರು ಒಪ್ಪಿದ್ದಾರೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿ ಪ್ರಣಮ್ ಮೊಹಾಂತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸೆಪ್ಟೆಂಬರ್‌ನಲ್ಲಿ ಸಮಿತಿ ವರದಿ ಬರಲಿದೆ. ಆನ್‍ಲೈನ್ ಗೇಮ್ ನಿಯಂತ್ರಿಸಲು ಸಮಿತಿ ಮಾಡುವ ಶಿಫಾರಸ್ಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆನ್‍ಲೈನ್ ಗೇಮ್ ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಆನ್‍ಲೈನ್ ಆಟಗಳಿಗೆ ಸಂಬಂಧಿಸಿದಂತೆ 347 ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಜುಲೈ ಅಂತ್ಯಕ್ಕೆ 159 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

19 mins ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

31 mins ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

40 mins ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

2 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

2 hours ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

2 hours ago