ರಾಜ್ಯ

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗೆ ಕಡಿವಾಣ ಪಕ್ಕಾ: ವಿಧಾನಸಭೆಯಲ್ಲಿ ಗಂಭೀರ ಚರ್ಚೆ

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ ಮಾದಕ‌ ವಸ್ತುಗಳ ವ್ಯಸನಕ್ಕಿಂತ ಹೆಚ್ಚು ಹಾನಿಯನ್ನು ಆನ್‍ಲೈನ್ ಗೇಮ್‍ಗಳು ಮಾಡುತ್ತಿವೆ. ಇದರ ನಿಯಂತ್ರಣಕ್ಕಾಗಿ 2021ರಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತ ಗೇಮಿಂಗ್ ಒಕ್ಕೂಟ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. 2022ರಲ್ಲಿ ಈ ತಿದ್ದುಪಡಿ ಕಾಯ್ದೆ ರದ್ದಾಗಿದೆ. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದರು.

ಕಂಪ್ಯೂಟರ್, ಮೊಬೈಲ್ ಆಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿ ಆನ್‍ಲೈನ್ ಗೇಮ್ ಆಡುವುದನ್ನು ಕಾಯ್ದೆ ವ್ಯಾಪ್ತಿಗೆ ತರಲಾಗಿದೆ. ಕಳೆದ ಏ.8ರಂದು ಆನ್‍ಲೈನ್ ಗೇಮ್ ನಡೆಸುವವರ ಸಭೆ ನಡೆಸಿ ನಿಯಂತ್ರಣ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಅವರು ಒಪ್ಪಿದ್ದಾರೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿ ಪ್ರಣಮ್ ಮೊಹಾಂತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸೆಪ್ಟೆಂಬರ್‌ನಲ್ಲಿ ಸಮಿತಿ ವರದಿ ಬರಲಿದೆ. ಆನ್‍ಲೈನ್ ಗೇಮ್ ನಿಯಂತ್ರಿಸಲು ಸಮಿತಿ ಮಾಡುವ ಶಿಫಾರಸ್ಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆನ್‍ಲೈನ್ ಗೇಮ್ ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಆನ್‍ಲೈನ್ ಆಟಗಳಿಗೆ ಸಂಬಂಧಿಸಿದಂತೆ 347 ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಜುಲೈ ಅಂತ್ಯಕ್ಕೆ 159 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

4 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

4 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

5 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago