ರಾಜ್ಯ

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗೆ ಕಡಿವಾಣ ಪಕ್ಕಾ: ವಿಧಾನಸಭೆಯಲ್ಲಿ ಗಂಭೀರ ಚರ್ಚೆ

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ ಮಾದಕ‌ ವಸ್ತುಗಳ ವ್ಯಸನಕ್ಕಿಂತ ಹೆಚ್ಚು ಹಾನಿಯನ್ನು ಆನ್‍ಲೈನ್ ಗೇಮ್‍ಗಳು ಮಾಡುತ್ತಿವೆ. ಇದರ ನಿಯಂತ್ರಣಕ್ಕಾಗಿ 2021ರಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತ ಗೇಮಿಂಗ್ ಒಕ್ಕೂಟ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. 2022ರಲ್ಲಿ ಈ ತಿದ್ದುಪಡಿ ಕಾಯ್ದೆ ರದ್ದಾಗಿದೆ. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದರು.

ಕಂಪ್ಯೂಟರ್, ಮೊಬೈಲ್ ಆಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿ ಆನ್‍ಲೈನ್ ಗೇಮ್ ಆಡುವುದನ್ನು ಕಾಯ್ದೆ ವ್ಯಾಪ್ತಿಗೆ ತರಲಾಗಿದೆ. ಕಳೆದ ಏ.8ರಂದು ಆನ್‍ಲೈನ್ ಗೇಮ್ ನಡೆಸುವವರ ಸಭೆ ನಡೆಸಿ ನಿಯಂತ್ರಣ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಅವರು ಒಪ್ಪಿದ್ದಾರೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿ ಪ್ರಣಮ್ ಮೊಹಾಂತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸೆಪ್ಟೆಂಬರ್‌ನಲ್ಲಿ ಸಮಿತಿ ವರದಿ ಬರಲಿದೆ. ಆನ್‍ಲೈನ್ ಗೇಮ್ ನಿಯಂತ್ರಿಸಲು ಸಮಿತಿ ಮಾಡುವ ಶಿಫಾರಸ್ಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆನ್‍ಲೈನ್ ಗೇಮ್ ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಆನ್‍ಲೈನ್ ಆಟಗಳಿಗೆ ಸಂಬಂಧಿಸಿದಂತೆ 347 ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಜುಲೈ ಅಂತ್ಯಕ್ಕೆ 159 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

2 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

5 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

9 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

11 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

12 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 hours ago