ರಾಜ್ಯ

ಜೈಲಿನಲ್ಲಿ ಕಠಿಣ ನಿಯಮ ಜಾರಿ : ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇನ್ನಷ್ಟು ಕಷ್ಟಪಡಬೇಕಾದ ಸಂದರ್ಭ ಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಆಗಿರುವ ಅವರು ಕನಿಷ್ಟ ಸೌಲಭ್ಯಗಳಿಗಾಗಿ ಮತ್ತೆ ಪರದಾಡಬೇಕಾಗಿದೆ. ಈ ಮೊದಲು ಅವರಿಗೆ ವಾಕಿಂಗ್ ಮಾಡಲು ಅವಕಾಶ ನೀಡಲಾಗಿತ್ತು. ಆದರೆ ಈಗ ಅದನ್ನು ಕೂಡ ನಿರಾಕರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿದ್ದಾರೆ. ಇದರಿಂದ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ನಡೆದಿರುವುದು ಪದೇಪದೇ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಜೈಲು ಅಧೀಕ್ಷಕರಾಗಿ ಐಪಿಎಸ್ ಅಧಿಕಾರಿ ಅಂಶು ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಜೈಲಿನಲ್ಲಿ ಬದಲಾವಣೆ ತರಲು ಅಂಶು ಕುಮಾರ್ ಅವರು ಮುಂದಾಗಿದ್ದಾರೆ. ಪ್ರತಿ ದಿನ ಐಪಿಎಸ್ ಅಧಿಕಾರಿಯಿಂದ ಜೈಲಿನಲ್ಲಿ ಮಾನಿಟರಿಂಗ್ ಮಾಡಲಾಗುತ್ತಿದೆ. ಸಿಬ್ಬಂದಿಗಳಿಂದ ಪ್ರತಿದಿನ ಜೈಲಿನಲ್ಲಿ ತಪಾಸಣೆ ನಡೆಯುತ್ತಿದೆ. ಎಷ್ಟೇ ಪ್ರಯತ್ನ ಪಟ್ಟರು ಜೈಲಿನೊಳಗೆ ಮೊಬೈಲ್ ಪತ್ತೆ ಆಗುತ್ತಲೇ ಇದೆ. ಮೊಬೈಲ್ ಫೋನ್ಗಳಿಗೆ ಕಡಿವಾಣ ಹಾಕಲು ಐಪಿಎಸ್ ಅಧಿಕಾರಿ ಹರಸಾಹಸ ಮಾಡುತ್ತಿದ್ದಾರೆ. ಜೈಲಿನಲ್ಲಿ ಮೊಬೈಲ್ ಸಿಗುತ್ತಿದ್ದಂತೆಯೇ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಸಾಲು ಸಾಲು ಕೇಸ್ ದಾಖಲಾಗುತ್ತಿವೆ. ಅಂಶು ಕುಮಾರ್ ಅವರ ಕಠಿಣ ಕ್ರಮದಿಂದ ದರ್ಶನ್ ಅವರಿಗೂ ಸಂಕಷ್ಟ ಶುರುವಾಗಿದೆ.

ಸದ್ಯಕ್ಕೆ ದರ್ಶನ್ ಅವರಿಗೆ ವಾಕಿಂಗ್ ಮಾಡಲು ಅವಕಾಶ ಇಲ್ಲ. ರೂಮಿಗೆ ಬರುತ್ತಿದ್ದ ಊಟ, ತಿಂಡಿ ಕೂಡ ಬಂದ್ ಆಗಿದೆ. ದರ್ಶನ್ ಈಗ ತಾವೇ ಹೋಗಿ ಊಟ, ತಿಂಡಿ ತರಬೇಕಿದೆ. ಈ ಮೊದಲು ಜೈಲಿನ ಸಿಬ್ಬಂದಿಯೇ ದರ್ಶನ್ ಕೊಠಡಿಗೆ ಊಟ, ತಿಂಡಿ ತಂದು ಕೊಡುತ್ತಿದ್ದರು. ಈಗ ಅದನ್ನು ಬಂದ್ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

12 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

49 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago